March 22, 2026

ನಾಳೆ ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟ ಲಾರಿ ಮಾಲಕರು

0
image_editor_output_image-1888497606-1678971171989.jpg

ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ.

ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು.

ರಾಜ್ಯ ಸರ್ಕಾರದ ಸೂಚನೆಯಂತೆ ಲಾರಿ ಮಾಲೀಕರು, ಏಜೆಂಟರ ಜೊತೆ ಬೆಂಗಳೂರು ವಿಶೆಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ಗುರುವಾರ ಸಭೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!