February 1, 2026

ವ್ಹೀಲಿಂಗ್  ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

0
image_editor_output_image-852375135-1679140954953.jpg

ಹಾಸನ: ವ್ಹೀಲಿಂಗ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನದ ಗವೇನಹಳ್ಳಿಯಲ್ಲಿ ನಡೆದಿದೆ.

ಆಟೋ ಚಾಲಕ ಸುಮಂತ್ (20) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಹಾಸನ ನಗರದ ನಿವಾಸಿ ಸುಮಂತ್ ಗವೇನಹಳ್ಳಿ ಬಳಿ ತನ್ನ ಬೈಕ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ವ್ಹೀಲಿಂಗ್ ಮಾಡದಂತೆ ಗವೇನಹಳ್ಳಿ ಗ್ರಾಮದ ಯುವಕರು ಹೇಳಿದ್ದಾರೆ.

ಇದೇ ವಿಚಾರಕ್ಕೆ ಸುಮಂತ್ ಹಾಗೂ ಗವೇನಹಳ್ಳಿ ಗ್ರಾಮದ ಯುವಕರ ನಡುವೆ ಗಲಾಟೆ ಶುರುವಾಗಿದೆ. ಅಲ್ಲೇ ಇದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!