February 3, 2026

ಪುತ್ತೂರು: ಹಾವು ಕಚ್ಚಿದ ಹೆತ್ತ ತಾಯಿಯನ್ನು ಸಮಯ ಪ್ರಜ್ಞೆಯಿಂದ ರಕ್ಷಿಸಿದ ಮಗಳು

0
IMG-20230320-WA0001.jpg

ಪುತ್ತೂರು: ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ಹಾವು ಕಚ್ಚಿದ ಹೆತ್ತ ತಾಯಿಯ ಅಮೂಲ್ಯ ಜೀವವನ್ನ ಮಗಳೇ ಸಮಯಪ್ರಜ್ಞೆಯಿಂದ ರಕ್ಷಿಸಿದ ಹೃದಯ ಸ್ಪರ್ಶಿ ಘಟನೆಯೊಂದು ಬೆಳಕಿಗೆ ಬಂದಿದೆ.

ಈಕೆ ವಿವೇಕಾನಂದ ಪದವಿ ಕಾಲೇಜಿನ ಭಾರತ್ ಸ್ಕೌಟ್ ಅಂಡ್ ಗೈಡ್ ನ (rovers and rangers ) ವಿದ್ಯಾರ್ಥಿನಿ ಶ್ರಮ್ಯ ರೈ, ಅವರೂ ತಮ್ಮ ತಾಯಿಯಾದ ಕೆಯ್ಯೂರು ಗ್ರಾಮ ಪಂಚಾಯತಿ ಸದಸ್ಯೆ ಮಮತ ರೈ ಎಂಬುವರಿಗೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವೊಂದು ಕಚ್ಚಿತ್ತು. ಈ ವೇಳೆ ಸಮಯ ಪ್ರಜ್ಞೆಯಿಂದ ಘಟನಾ ಸ್ಥಳಕ್ಕೆ ಧಾವಿಸಿ, ಕಾಲಿಗೆ ಕಚ್ಚಿದ ಹಾವಿನ ವಿಷವನ್ನು ಬಾಯಿಯಲ್ಲೇ ಕಚ್ಚಿ ತೆಗೆದು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಬಳಿಕ ಕೂಡಲೇ ಸ್ಥಳೀಯ ಆಸ್ಪತ್ರೆಗೆ ತಾಯಿಯನ್ನು ಕರೆದೊಯ್ದು ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಅಷ್ಟೇ ಅಲ್ಲದೇ ಮಗಳ ಧೈರ್ಯವನ್ನು ಸ್ಥಳೀಯರು ಮೆಚ್ಚಲೇ ಬೇಕೆಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಿಳಿದು ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸ್ಥಳೀಯ ನಿವಾಸಿಗಳು, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!