ಮಂಗಳೂರು: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಹಲ್ಲೆ
ಮಂಗಳೂರು: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.
ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.
ಇಂದು ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್ಗೆ ಹೋಗಿದ್ದರು.
ಈ ವೇಳೆ ಸ್ಥಳಕ್ಕೆ ಬಂದ 10 ಮಂದಿಯ ಆಟೋ ಚಾಲಕರ ತಂಡ “ನೀನು ಇಲ್ಲಿಗೆ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು” ಎಂದು ಬೆದರಿಸಿದ್ದಾರೆ.




