ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ತಂಡದಿಂದ ದಾಳಿ: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನ, ಆಸ್ಪತ್ರೆಗೆ ದಾಖಲು
ಕೊಪ್ಪಳ: ಇಸ್ಪೀಟ್ ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ.
ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.




