ಜಾಗಿಂಗ್ಗೆ ಹೋಗುತ್ತಿದ್ದಾಗ ಕಾರು ಢಿಕ್ಕಿ: ಟೆಕ್ ಸಿಇಒ ಸಾವು
ಮುಂಬೈ: ಜಾಗಿಂಗ್ಗೆ ಹೋಗಿದ್ದ ತಂತ್ರಜ್ಞಾನ ಸಂಸ್ಥೆಯೊಂದರ ಸಿಇಓಗೆ ಕಾರೊಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮುಂಬೈನ ವರ್ಲಿ ಪ್ರದೇಶದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ರಾಜಲಕ್ಷ್ಮಿ ರಾಮಕೃಷ್ಣ (42) ಎಂದು ಗುರುತಿಸಲಾಗಿದೆ. ದಾದರ್ ಮಾತುಂಗಾ ಪ್ರದೇಶದ ನಿವಾಸಿಯಾಗಿರುವ ರಾಜಲಕ್ಷ್ಮಿ ತನ್ನ ಪತಿಯೊಂದಿಗೆ ಬೆಳಗ್ಗೆ ಜಾಗಿಂಗ್ ಹೋಗಿದ್ದರು.
ಅಲ್ಲಿಂದ ಹಿಂದಿರುಗುವಾಗ ವರ್ಲಿ ಬಾಂದ್ರಾ ಬಳಿ ಈ ಘಟನೆ ಸಂಭವಿಸಿದೆ.




