February 4, 2026

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನೇ ಕೊಲೆಗೈದ ಪತಿ

0
image_editor_output_image1580284196-1679613668170.jpg

ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆಕೆಯನ್ನು ಮನಸ್ಸೋ ಇಚ್ಛೆ ಹೊಡೆದು ಕೊಂದು ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರ ಹಳ್ಳಿಯಲ್ಲಿ ನಡೆದಿದೆ.

ಗಾಯತ್ರಿ (39) ಮೃತ ಮಹಿಳೆಯಾಗಿದ್ದು, ಅಶ್ವತ್ಥಪ್ಪ ಕೊಲೆ ಮಾಡಿದ ಆರೋಪಿ. ಗಾಯತ್ರಿ ಹಾಗೂ ಅಶ್ವತ್ಥಪ್ಪನಿಗೆ ಮದುವೆಯಾಗಿ 20 ವರ್ಷ ಕಳೆದಿದ್ದು, ಅವರಿಗೆ 18 ವಷದ ಮಗಳು ಹಾಗೂ 14 ವರ್ಷದ ಮಗನಿದ್ದಾನೆ. ಆದರೆ ಅಶ್ವತ್ಥಪ್ಪ ಪ್ರತಿದಿನ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಹೊಡೆಯುವುದನ್ನು ಮಾಡುತ್ತಿದ್ದ.

ಇದರಿಂದಾಗಿ ಬೇಸತ್ತ ಪತ್ನಿ ಗಾಯತ್ರಿ ಹಾಗೂ ಮಕ್ಕಳು ಪ್ರತಿನಿತ್ಯ ಅಶ್ವತ್ಥಪ್ಪನಿಂದ ತಪ್ಪಿಸಿಕೊಳ್ಳುತ್ತಿದ್ದರು.

ಅಷ್ಟೇ ಅಲ್ಲದೇ ಮಕ್ಕಳನ್ನು ರಾತ್ರಿಯಾದ ಮೇಲೆ ಸಂಬಂಧಿಗಳ ಮನೆಗೆ ಕಳುಹಿಸುತ್ತಿದ್ದಳು. ಜೊತೆಗೆ ಹಣವಿಲ್ಲ ಮಗ ಶಾಲೆ ಬಿಟ್ಟು ಗ್ಯಾರೆಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ.

Leave a Reply

Your email address will not be published. Required fields are marked *

error: Content is protected !!