ಮಂಡ್ಯದ ಗೆಜ್ಜೆಲಗೆರೆ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತ: ಕೊಡಗು ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತ್ಯು
ಮಡಿಕೇರಿ : ಮಂಡ್ಯದ ಗೆಜ್ಜೆಲಗೆರೆ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಬಲಮುರಿ ಗ್ರಾಮದ ಚೆಯ್ಯಂಡ ಕವಿತಾ(45) ಹಾಗೂ ಅವರ ಪುತ್ರ ಹತ್ತನೇ ತರಗತಿಯ ವಿದ್ಯಾರ್ಥಿ ಆರ್ಯನ್ (15) ಮೃತ ದುರ್ದೈವಿಗಳು.
ಪತಿ ಚೆಯ್ಯಂಡ ಕಟ್ಟಿ ಮುತ್ತಪ್ಪ ಅವರಿಗೆ ಗಾಯಗಳಾಗಿದ್ದು, ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




