March 11, 2026

ಸ್ಯಾಂಡಲ್‌ವುಡ್‌ನ ನಿರ್ದೇಶಕ ಕಿರಣ್‌ ಗೋವಿ ಹೃದಯಾಘಾತದಿಂದ ನಿಧನ

0
IMG-20230326-WA0001.jpg

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

‘ಪಯಣ’, ‘ಸಂಚಾರಿ’, ‘ಪಾರು ವೈಫ್ ಆಫ್ ದೇವದಾಸ್‌’, ‘ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿರುವ ಕಿರಣ್‌ ಗೋವಿ ಅವರು ಕಚೇರಿಯಲ್ಲಿದ್ದ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಕಿರಣ್‌ ಗೋವಿ ನಿರ್ದೇಶನ ಮಾಡಿದ್ದ ಪಯಣ ಸಿನಿಮಾ ದೊಡ್ಡ ಹಿಟ್‌ ಆಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!