ವ್ಯಂಗವಾಡಿದ್ದ ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಹತ್ಯೆ
ಬೆಂಗಳೂರು: ಮದ್ಯದ ಅಮಲಿನಲ್ಲಿ ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆಗೈದಿದ್ದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ.
ನರೇಶ್ ಸಾವನ್ನಪ್ಪಿದ ವ್ಯಕ್ತಿ ಹಾಗೂ ಮಾರಿಮುತ್ತು ಬಂಧಿತ ವ್ಯಕ್ತಿ. ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದೇ ವಿಚಿತ್ರ ಮನಸ್ಥಿತಿಯವನಾಗಿದ್ದ.
ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ.
ಶನಿವಾರ ಮಧ್ಯಾಹ್ನ ಮಾರಿಮುತ್ತು ಜೊತೆ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್ನಲ್ಲಿ ಕುಡಿಯಲು ಬಂದಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದು ಆತನ ಬಳಿ ನಿನಗೆ ದುಶ್ಚಟಗಳಿವೆ,
ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ ಎಂದು ಆತನನ್ನ ವ್ಯಂಗ್ಯವಾಡಿದ್ದಾನೆ.




