March 11, 2026

ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಾ.31ರಿಂದ ನಿಷೇಧಾಜ್ಞೆ ಜಾರಿ

0
IMG-20230327-WA0036.jpg

ಮಂಗಳೂರು: ಮಾರ್ಚ್ 31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಂತೆ ಜಿಲ್ಲಾ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!