ವಿಟ್ಲ: ಅಂಗಡಿ ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ, ಆರೋಪಿಯ ಬಂಧನ
ವಿಟ್ಲ : ಕೆಲಸದಾಳು ಅಂಗಡಿ ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ನಡೆಸಿದ ಪ್ರಕರಣ ವಿಟ್ಲ ಕಸಬ ಗ್ರಾಮದ ರಂಗರಮಜಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನು ಅಲಿಯಾಸ್ ಮನೋಹರ ಬಂಧಿತ.
ಜ 20 ರಿಂದ ಮಾ 20 ರವರೆಗೆ ಎರಡು ತಿಂಗಳ ಕಾಲ ವಿಟ್ಲ ಕಸಬ ಗ್ರಾಮದ ರಂಗರಮಜಲು ಮುರಳಿಧರ ಎಂಬವರ ಮನೆಯಲ್ಲಿ ಯಾರೂ ಇರಲಿಲ್ಲ.
ಈ ಸಂದರ್ಭವನ್ನು ಬಳಸಿಕೊಂಡ ಆರೋಪಿಯು ಒಟ್ಟು 3.20,000 ಮೌಲ್ಯದ ಒಟ್ಟು 64 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನಗೈದಿದ್ದ.
ಈ ಕುರಿತು ಮುರಳಿಧರ ರವರು ಠಾಣೆಗೆ ದೂರು ನೀಢಿದ್ದು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.




