February 3, 2026

ಪುತ್ತೂರು: ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಸಂಬಂಧ: ಮರ್ಯಾದೆಗೆ ಅಂಜಿ ಆತ್ಮಹತ್ಯೆ

0
70812723

ಪುತ್ತೂರು: ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ.

ನೆಟ್ಟಣಿಗೆಮೂಡ್ನೂರು ಗ್ರಾಮದ ವಜ್ರಮೂಲೆ ದಿ.ಕೊರಗ ರವರ ಪುತ್ರ ಶೀನಪ್ಪ (50) ಆತ್ಮಹತ್ಯೆ ಮಾಡಿಕೊಂಡವರು.

ಮೃತರ ಪತ್ನಿ ಜಾನಕಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೀನಪ್ಪ ರವರು ಏ.2 ರಂದು ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದು, ಮಧ್ಯಾಹ್ನ ಮದ್ಯ ಸೇವನೆ ಮಾಡಿ ಬಂದು ನನಗೆ ಹಾಗೂ ಪುತ್ರಿ ಅಶ್ವಿನಿಯವರಿಗೆ ಬೈಯಲು ಆರಂಭಿಸಿದ್ದರು. ನಂತರ ಸಂಜೆ ಮೋಟಾರು ಸೈಕಲ್‌ನಲ್ಲಿ ಪೇಟೆಗೆ ಹೋಗಿ ಬಂದವರು ತನಗೆ ಏಕಾಏಕಿಯಾಗಿ ಕೈಯಿಂದ ತಲೆಗೆ, ಮುಖಕ್ಕೆ, ಬೆನ್ನಿಗೆ, ಕಾಲಿಗೆ ಹೊಡೆದು ಕಾಲಿನಿಂದ ಸೊಂಟಕ್ಕೆ ತುಳಿದಿರುತ್ತಾರೆ. ನಂತರ ನಮ್ಮ 3 ಜನ ಮಕ್ಕಳು ಓಡಿಕೊಂಡು ಬಂದು ಹೊಡೆಯುವುದನ್ನು ತಡೆದಿರುತ್ತಾರೆ. ಬಳಿಕ ಅವರು ಕೋಪಗೊಂಡು ಬೈಕ್‌ ಹತ್ತಿ ಪೇಟೆಗೆ ಹೋಗಿದ್ದರು. ಇದೇ ವೇಳೆಗೆ ನಾನು ಹಾಗೂ ಮಕ್ಕಳು ಪಕ್ಕದ ಮನೆಯ ಕರಿಯಪ್ಪ ಅವರ ಪತ್ನಿ ರತ್ನಾ ಅವರಲ್ಲಿಗೆ ಹೋಗಿ ನನ್ನ ಗಂಡನಲ್ಲಿ ಯಾಕೆ ಮಾತನಾಡುತ್ತೀಯಾ ಎಂದು ಕೇಳಿದಾಗ ಆ ಮನೆಯವರು ಹಾಗೂ ತಮ್ಮ ಮಧ್ಯೆ ಮಾತಿಗೆ ಮಾತಾಗಿ ಬೊಬ್ಬೆ ಕೇಳಿ ನನ್ನ ಗಂಡ ಶೀನಪ್ಪ ರವರು ನನಗೆ ಹಾಗೂ ಮಕ್ಕಳಿಗೂ ಹೊಡೆಯಲು ಯತ್ನಿಸಿದಾಗ ರತ್ನಾ ರವರು ತಡೆದಿದ್ದರು. ನಂತರ ಶೀನಪ್ಪ ರವರು ಮೋಟಾರು ಸೈಕಲ್‌ನಲ್ಲಿ ಹೋಗಿರುತ್ತಾರೆ. ರಾತ್ರಿ ಮನೆಗೆ ಬಂದಾಗ ಅವರು ಮೊಬೈಲ್ ಹಾಗೂ ಪರ್ಸ್ ಮನೆಯ ಒಳಗೆ ಇಟ್ಟು, ಮೋಟಾರು ಸೈಕಲ್ ಮನೆಯ ಅಂಗಳದಲ್ಲಿ ನಿಲ್ಲಿಸಿ ಹೋಗಿದ್ದರು. ರಾತ್ರಿ 10 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಸಂಶಯಗೊಂಡು ನೆರೆಯ ಕೃಷ್ಣಪ್ಪ ರವರ ಮನೆಯ ಸುತ್ತಮುತ್ತ ಹುಡುಕಾಡಿದಾಗ ರಾತ್ರಿ ತೋಟದ ಪಕ್ಕದಲ್ಲಿರುವ ಮಾವಿನ ಮರದ ಕೊಂಬೆಗೆ ಬಿದಿರಿನ ಏಣಿಯ ಮೂಲಕ ಹತ್ತಿ ಪಾಲಿಸ್ಟರ್ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೀನಪ್ಪ ಹಾಗೂ ನೆರೆ ಮನೆಯ ರತ್ನಾ ರವರ ಪ್ರೇಮ ಸಂಬಂಧ ವಿಚಾರ ಪತ್ನಿ ಹಾಗೂ ನೆರೆಕರೆಯವರಿಗೆ ಗೊತ್ತಾಗಿ ಮರ್ಯಾದೆಗೆ ಅಂಜಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಮೃತ ಶೀನಪ್ಪ ರವರ ಪತ್ನಿ ಜಾನಕಿಯವರು ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!