September 20, 2024

ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವು

0

ಮೂವರಸನ್: ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ 5 ಮೃತರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ.

ಈ ಅರ್ಚಕರ ತಂಡ ಮೂವರಸನ್ ಪೇಟ್ ನಲ್ಲಿನ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 ಮಂದಿ ಅರ್ಚಕರು ಕಲ್ಯಾಣಿ/ ನೀರಿರುವ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ 5 ಮಂದಿ ನೀರಿನಲ್ಲಿ ಮುಳುಗಿದ್ದರು.

ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!