September 20, 2024

ಪುತ್ತೂರು: ಪುತ್ತೂರು ವಿಭಾಗದ KSRTC ಉದ್ಯೋಗಿಯ ಮೃತದೇಹ ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆ

0

ಪುತ್ತೂರು: ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ. ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಎ.6ರಂದು ಮಧ್ಯರಾತ್ರಿ ಪತ್ತೆಯಾಗಿದೆ.

ಮೃತ ದೇಹವನ್ನು ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ(34) ಎಂಬವರದ್ದು ಎಂದು ಗುರುತಿಸಲಾಗಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!