February 2, 2026

ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುತ್ತೇವೆ ಎಂದ ಕಾಂಗ್ರೆಸ್ ಮುಖಂಡ

0
image_editor_output_image417307545-1680911426344.jpg

ಚೆನ್ನೈ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಪಕ್ಷದ ನಾಯಕ ಬೆದರಿಕೆ ಹಾಕಿದ್ದು ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀರವ್ ಮೋದಿ, ಲಲಿತ್ ಮೋದಿ ಮತ್ತು ಎಲ್ಲಾ ಕಳ್ಳರ ಹೆಸರುಗಳು ಹೇಗೆ ಮೋದಿ ಎಂದು ಟೀಕಿಸಿದರು.

ಈ ಹೇಳಿಕೆಗಾಗಿ 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾರ್ಚ್ 23ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು.

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಸಂಸದ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ರಾಹುಲ್ ಗಾಂಧಿ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ವಿರೋಧ ಪಕ್ಷದ ನಾಯಕರ ದನಿ ಅಡಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ರಾಹುಲ್ ಗಾಂಧಿ ಸಂಸದ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ತಮಿಳುನಾಡಿನ ದಿಂಡುಗಲ್‌ನಲ್ಲಿ ಕಾಂಗ್ರೆಸ್‌ನ ಎಸ್‌ಸಿ/ಎಸ್‌ಟಿ ವಿಭಾಗವು ಪ್ರತಿಭಟನೆ ನಡೆಸಿತ್ತು.

ಆ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಣಿಕಂದನ್ ಮಾತನಾಡಿ, ಮಾ.23ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ನಾಲಿಗೆ ಕತ್ತರಿಸುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!