February 3, 2026

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ

0
IMG-20230411-WA0015.jpg

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಕೆಎಸ್​ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

“ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ಈಶ್ವರಪ್ಪ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಕಳೆದ 40 ವರ್ಷಗಳಲ್ಲಿ ಪಕ್ಷ ನನಗೆ ಪಕ್ಷ ಸಾಕಷ್ಟು ಜವಾಬ್ದಾರಿಗಳನ್ನು ನೀಡಿದೆ. ನಾನು ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿಯಾಗುವ ಗೌರವದ ಸ್ಥಾನಮಾನ ನೀಡಿದ ಪಕ್ಷದ ಹಿರಿಯ ನಾಯಕರಿಗೆ ನನ್ನ ಅನಂತ ಧನ್ಯವಾದಗಳು ” ಎಂದು ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!