ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ಸದಸ್ಯತ್ವಕ್ಕೆ ರಾಜಿನಾಮೆ
ಬೆಳಗಾವಿ (ಅಥಣಿ) : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ ಅಗತ್ಯತೆ ಇಲ್ಲ. ವಿಧಾನಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡುವಂತೆ ಕ್ಷೇತ್ರದ ಜನತೆ ಸಲಹೆ ನೀಡಿದ್ದಾರೆ. ನಾನೂ ಕೂಡ ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟ ರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲೂ ನಾನಿಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕಿಲ್ಲ ಎಂದರು.


