ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ಧನ ಪೂಜಾರಿ ಅವರ ಆಶಿರ್ವಾದ ಪಡೆದ ಯು.ಟಿ ಖಾದರ್
ಬಂಟ್ವಾಳ; ಉಳ್ಳಾಲ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ, ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ್ ಬಿಲ್ಲವ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಇಂದು ಬೇಟಿ ನೀಡಿ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಮುಂದಿನ ಚುನಾವಣೆಯ ಗೆಲುವಿಗಾಗಿ ಆಶಿರ್ವಾದ ಪಡೆದರು.
ಕಾಂಗ್ರೇಸ್ ಕಾರ್ಯಕರ್ತರು ಕುಟುಂಬದ ಸದಸ್ಯರು ಅವರಿಗೆ ಕಿಂಚಿತ್ತೂ ನೋವಾಗದ ರೀತಿಯಲ್ಲಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ನೋವು ನಲಿವುಗಳಿಗೆ ಸದಾ ಜೊತೆ ನಿಂತು ಪ್ರೋತ್ಸಾಹ ನೀಡಿ ಎಂದು ಶಾಸಕರಿಗೆ ಪೂಜಾರಿ ಅವರು ಕಿವಿಮಾತು ಹೇಳಿದರು.




