February 3, 2026

ಸಿಎಎ, ಎನ್‌ಆರ್‌ಸಿ ಕಾಯ್ದೆಯನ್ನು ಹಿಂಪಡೆಯದಿದ್ದರೆ ಬೀದಿಗಿಳಿದು ಪ್ರತಿಭಟನೆ: ಅಸಾಸುದ್ದೀನ್‌‌‌ ಓವೈಸಿ

0
Screenshot_2021-11-22-11-54-43-14_680d03679600f7af0b4c700c6b270fe7.jpg

ನವದೆಹಲಿ: ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿಯನ್ನು ಹಿಂತೆಗೆದುಕೊಳ್ಳುವಂತೆ ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್‌‌‌ ಓವೈಸಿ ಅವರು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.

ಬಾರಾಬುಂಕಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು ಮತ್ತೊಂದು ಶಾಹೀನ್ ಬಾಗ್ ಸೃಷ್ಟಿಸುತ್ತಾರೆ” ಎಂದಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ. ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿದ ರೀತಿಯಲ್ಲಿ ಸಿಎಎ ಕಾಯ್ದೆನ್ನು ರದ್ದುಪಡೆಸಬೇಕು” ಎಂದು ಹೇಳಿದ್ದಾರೆ.

“ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಾಗೂ ರಾಷ್ಟ್ರೀಯ ನಾಗರಿಕೆ ನೋಂದಣಿ ಮೇಲೆ ಕಾನೂನು ಮಾಡಿದರೆ ನಾವು ಮತ್ತೆ ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!