February 2, 2026

ಉಳ್ಳಾಲ: ಮಸೀದಿಗಳಲ್ಲಿ ಚುನಾವಣಾ ಪ್ರಚಾರ: ಶಾಸಕ ಯು.ಟಿ ಖಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

0
IMG-20230413-WA0087.jpg

ಉಳ್ಳಾಲ: ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಉಳ್ಳಾಲ ಶಾಸಕ ಯು.ಟಿ ಖಾದರ್ ವಿರುದ್ಧ ಚುನಾವಣಾ ಆಯೋಗಕ್ಕೆ ಎಸ್ ಡಿಪಿಐ ನಿಂದ ದೂರು ನೀಡಲಾಗಿದೆ.

ಮದನಿ ನಗರ, ಉಳ್ಳಾಲ ಕೋಡಿ ತೋಟದ ಮಸೀದಿ ಹಾಗೂ ಮದರಸಗಳಲ್ಲಿ ಶಾಸಕ ಯು.ಟಿ ಖಾದರ್ ಮಾತನಾಡುತ್ತಿರುವ ಚಿತ್ರಗಳು ವೈರಲ್ ಆಗಿತ್ತು. ಇದೊಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದು ಸಮಂಜಸವಲ್ಲ, ತಕ್ಷಣ ಆಯೋಗ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಅನ್ನುವ ಒತ್ತಾಯ ಮಾಡಿದ್ದಾರೆ. ಆನ್ಲೈನ್ ಮುಖೇನ ದೂರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ದೂರಿನ ಆಧಾರದಂತೆ ಮದರಸ ಮಸೀದಿಗಳಿಗೆ ತೆರಳಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಮತಯಾಚನೆ ಕುರಿತು ವೀಡಿಯೋ ದಾಖಲೆಗಳಿದ್ದರೆ ತಕ್ಷಣ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ‌

Leave a Reply

Your email address will not be published. Required fields are marked *

error: Content is protected !!