ಬಂಟ್ಟಾಳ: ಕೆಲಸ ಮಾಡುವಾಗ ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು
ಬಂಟ್ವಾಳ: ಕೆಲಸ ಮಾಡುವಾಗ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.
ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ ಎಂಬವರು ಮೃತಪಟ್ಟ ಯುವಕ.
ಮಾಡಮೆಯಲ್ಲಿ ಮನೆಯೊಂದರಲ್ಲಿ ಪ್ಲಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




