ದ್ವಿತೀಯ ಪಿಯುಸಿ ಫಲಿತಾಂಶ: ದ.ಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇಕಡಾ 74.67ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.
ಬೆಂಗಳೂರಿನ ಎನ್ ಎಂಕೆಆರ್ ವಿ ಕಾಲೇಜಿನ ತಬಸ್ಸುಮ್ ಶೇಖ್ ಕಲಾ ವಿಭಾಗದಲ್ಲಿ 593 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ, ಬಳ್ಳಾರಿಯ ಹಿಂದೂ ಇಂದು ಇನ್ನೋವೇಟಿವ್ ಪಿಯು ಕಾಲೇಜಿನ ಕುಷಾ ನಾಯ್ಕ್ ಜಿಎಲ್ ಅವರು 592 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಅದೇ ಕಾಲೇಜಿನ ದದ್ದಿ ಕರಿಬಸಮ್ಮ, ಬಳ್ಳಾರಿಯ ಎಸ್ ಯುಜೆಎಂ ಕಾಲೇಜಿನ ಮುತ್ತೂರು ಮಲ್ಲಮ್ಮ, ಬೆಳಗಾವಿಯ ಲಿಂಗರಾಜ ಪಿಯು ಕಾಲೇಜಿನ ಪ್ರಿಯಾಂಕ ಕುಲಕರ್ಣಿ, ವಿಜಯಪುರದ ಎಸ್ ಕೆ ಪಿಯು ಕಾಲೇಜಿನ ರಾಹುಲ್ 592 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.