September 20, 2024

ಮಂಗಳೂರು: ಬಂಟ್ವಾಳದ ಯುವಕನ ಮೃತದೇಹ ಪಣಂಬೂರು ಬೀಚ್‌ನಲ್ಲಿ ಪತ್ತೆ

0

ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.

ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ.

ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!