August 21, 2026

ಜಗದೀಶ ಕಾರಂತನ ವಿರುದ್ದ ಕಾನೂನು ಕ್ರಮಕ್ಕೆ ಎಸ್.ಡಿ.ಪಿ.ಐ ಆಗ್ರಹ

0
IMG-20211123-WA0001.jpg

ಬಂಟ್ವಾಳ: ನವೆಂಬರ್ 21 ರಂದು ಬಂಟ್ವಾಳ ತಾಲೂಕಿನ ಕಾರಿಂಜೆ ದೇವಸ್ಥಾನದ ರಥಬೀದಿಯಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ರುದ್ರಗಿರಿಯ ರಣಕಹಳೆ ಎಂಬ ಸಭೆಯಲ್ಲಿ, ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾದ ಜಗದೀಶ ಕಾರಂತನು ತನ್ನ ಭಾಷಣದುದ್ದಕ್ಕೂ ದಕ್ಷಿಣ ಕನ್ನಡದ ಗೌರವಾನ್ವಿತ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಪೋಲಿಸ್ ಅಧಿಕಾರಿಗಳ ವಿರುದ್ಧ ಅಸಹ್ಯಯೆನಿಸುವ ರೀತಿಯಲ್ಲಿ ಕೊರಳು ಪಟ್ಟಿ ಹಿಡಿದು ಎಳೆದು ತರುತ್ತೇವೆ ಮತ್ತು ಪೋಲೀಸ್ ಅಧಿಕಾರಿಗಳನ್ನು ಬೆತ್ತಲುಗೊಳಿಸುತ್ತೇವೆ ಎನ್ನುವಂತಹ ಕಾನೂನು ಬಾಹಿರ ಹೇಳಿಕೆ ಮತ್ತು ಸಾರ್ವಜನಿಕವಾಗಿ ಅಧಿಕಾರಿಗಳನ್ನು ನಿಂದಿಸುವಂತಹ ಕೃತ್ಯಗಳಲ್ಲಿ ತೊಡಗಿದ್ದಾನೆ.

ಜಿಲ್ಲೆಯಲ್ಲಿ ಘಣತೆ ಗೌರವವಿರುವ ಅಧಿಕಾರಿಗಳನ್ನು ಸಾರ್ವಜನಿಕವಾಗಿ ನಿಂದಿಸಿರುವುದು ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ತಿಳಿಸಿದ್ದಾರೆ.

ಸಭೆ ನಡೆದು ಒಂದು ದಿನ ಕಳೆದರು ಕೂಡ, ಪೋಲಿಸ್ ಇಲಾಖೆ ಇನ್ನೂ ಕೂಡ ಪ್ರಕರಣ ದಾಖಲಿಸಲು ಮೀನಾಮೇಷ ಮಾಡುತ್ತಿರುವುದು ಸಮಾಜದಲ್ಲಿ ಅನುಮಾನಕ್ಕೆ ಎಡೆಮಾಡಿದೆ. ಬುದ್ಧಿವಂತರ ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ಇಂಥಹ ಸ್ಥಿತಿಯಾದರೆ ಇನ್ನು ಜನ ಸಾಮಾನ್ಯರಲ್ಲಿ ಅರಾಜಕತೆ ಮತ್ತು ಭಯದ ವಾತಾವರಣ ಉಂಟಾಗಲಿದೆ. ಆದೂದರಿಂದ ಈ ಕೂಡಲೆ ಕಾರ್ಯಕ್ರಮದ ಆಯೋಜಕರನ್ನು ಹಾಗೂ ಭಾಷಣಕಾರರನ್ನು ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸುತ್ತಿದ್ದೇವೆ.

Leave a Reply

Your email address will not be published. Required fields are marked *

You may have missed

error: Content is protected !!