ಧರ್ಮಸ್ಥಳ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ.
ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

