January 31, 2026

ಪುತ್ತೂರು: ಚೈತ್ರಾ ಇಲೆಕ್ಟ್ರಾನಿಕ್ಸ್ ಶಾಪ್ ಮಾಲಕ ನೇಣುಬಿಗಿದು ಆತ್ಮಹತ್ಯೆ

0
image_editor_output_image256883495-1682756158754.jpg

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದರ್ಬೆ ಸಮೀಪ ನಡೆದಿದೆ.

ಮೃತರನ್ನು ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49) ಎಂದು ಗುರುತಿಸಲಾಗಿದೆ.

ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಳಿ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಅನ್ನು ಹೊಂದಿದ್ದು, ಇಂದು ಬೆಳಿಗ್ಗೆ ತಮ್ಮ ಶಾಪ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೇಶ್ ಜೇಸಿಐನ ಸಕ್ರೀಯ ಸದಸ್ಯರಾಗಿದ್ದು , ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!