ಶ್ರೀ ದೇವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸದಾನಂದ ಶೆಟ್ಟಿಯ ಪತ್ನಿ ನಿಧನ
ಮಂಗಳೂರು : ಮಂಗಳೂರಿನ ಖ್ಯಾತ ಹೋಟೆಲ್ ಉದ್ಯಮಿ,ಶ್ರೀದೇವಿ ವಿದ್ಯಾ ಸಮೂಹ ಸಂಸ್ಥೆ ಗಳ ಮುಖ್ಯಸ್ಥ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಧ್ಯಕ್ಷ ಎ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಮೂಲ್ಕಿ ಕುಬೆವೂರು ದೊಡ್ಡಮನೆ ಮೈನಾ ಎಸ್ ಶೆಟ್ಟಿ(75 ವರ್ಷ )ಅವರು ಅಲ್ಪ ಕಾಲದ ಆಸಾವಖ್ಯ ದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ರಾತ್ರಿ 8 ಕ್ಕೆ ನಿಧನರಾದರು.
ಮೃತ ರು ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಯಾಗಿದ್ದು ಶ್ರೀದೇವಿ ಸಮೂಹ ಸಂಸ್ಥೆ ಗಳನ್ನು ಕಟ್ಟಿ ಬೆಳೆಸಿದವರು.
ಮಂಗಳೂರಿನ ಕ್ವಾಲಿಟಿ-ಕುಡ್ಲ ಹೋಟೆಲ್ ಸಮೂಹ ಗಳನ್ನು ತನ್ನ ಕ್ರಿಯಾಶೀಲತೆ ಇಂದ ಬೆಳೆಸಿ, ರಾಜ್ಯದ ಪ್ರತಿಷ್ಠಿತ ಕೇಟರಿಂಗ್ ಸಂಸ್ಥೆ ಯಾಗಿ ರೂಪು ಗೊಳ್ಳುವಲ್ಲಿ ಶ್ರಮಿಸಿದವರು.
ಜಿಲ್ಲೆಯ ಹಲವಾರು ಪ್ರತಿಷ್ಠಿತ ಕೇಟರಿಂಗ್, ಹೋಟೆಲ್ ಉದ್ಯಮಿಗಳಿಗೆ ಮಾರ್ಗದರ್ಶಿ ಹಿರಿಯರಾಗಿದ್ದವರು.




