ಕೆಸರಿನಲ್ಲಿ ಸಿಲುಕಿಕೊಂಡ ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಹೆಲಿಕಾಪ್ಟರ್
ರಾಯಚೂರು: ಭಾರೀ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ನೊಂದಿಗೆ ತೆರಳುತ್ತಿದ್ದ ಬೆಂಗಾವಲು ಹೆಲಿಕಾಪ್ಟರ್ ಕೆಲಕಾಲ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆಯಿತು.
ಸಾಕಷ್ಟು ಪ್ರಯತ್ನದ ನಂತರ ಹೆಲಿಕಾಪ್ಟರ್ ಅನ್ನು ಮಣ್ಣಿನಿಂದ ಹೊರತೆಗೆಯಲಾಯಿತು. ಇದರ ವಿಡಿಯೋಗಳು ಕೂಡಾ ವೈರಲ್ ಆಗಿವೆ. ಸಿಂಧನೂರಿನಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ತಮ್ಮ ಹೆಲಿಕಾಪ್ಟರ್ನಲ್ಲಿ ತೆರಳುತ್ತಿದ್ದಾಗ ಅದರೊಂದಿಗೆ ಬರುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಮಾಡಲು ಪ್ರಾರಂಭಿಸಿದಾಗ ಕೆಸರಿನಲ್ಲಿ ಸಿಲುಕಿತು.




