February 4, 2026

ಉಳ್ಳಾಲ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ವಾಹನ ಸಹಿತ 10 ಮಂದಿಯ ಬಂಧನ

0
IMG-20230101-WA0044.jpg

ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ.

ಬಂಧಿತರನ್ನು, ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ ಅಕ್ಬರ್, ಬೀರಿ ನಿವಾಸಿ ಅಬ್ಬಾಸ್, ಮಾಡೂರು ನಿವಾಸಿ ಅಮೀನ್, ಮಾರಿಪಳ್ಳ ನಿವಾಸಿ ಶಂಶೀರ್, ಅಡ್ಯಾರ್ ನಿವಾಸಿ ಅಶ್ವಿತ್, ಇಸ್ಮಾಯಿಲ್, ಬಜಾಲ್ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಎಂಟು ಬೈಕ್, ಒಂದು ರಿಕ್ಷಾ ಸಹಿತ 14,500 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!