ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತಚಲಾಯಿಸಿದರು.
ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

