September 20, 2024

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: 10ಕ್ಕೂ ಅಧಿಕ ಮಂದಿ ಮೃತ್ಯು

0

ಶಿವಮೊಗ್ಗ: ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಇಂದು(ಗುರುವಾರ) ಸಂಜೆ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು 10ಕ್ಕೂ ಅಧಿಕ ಮಂದಿ ದಾರುಣ ಅಂತ್ಯ ಕಂಡಿದ್ದಾರೆ.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೆಂಕಟಮಹಾಲಕ್ಷ್ಮಿ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ಗಳ ನಡುವೆ ಈ ಅಪಘಾತ ಸಂಭವಿಸಿದೆ.

ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

ಎರಡೂ ಬಸ್ ಗಳು ಒಂದರೊಳಗೊಂದು ಸಿಲುಕಿಕೊಂಡಿವೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸಹಿತ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!