March 17, 2026

ಮುಖ್ಯಮಂತ್ರಿ ಹುದ್ದೆಗೆ ಬಸವರಾಜ ಬೊಮ್ಮಾಯಿ ರಾಜೀನಾಮೆ

0
IMG-20230513-WA0222.jpg

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.

ಇಂದು ರಾತ್ರಿ ರಾಜ ಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಅವರ ನಿವೃತ್ತಿ ಘೋಷಣೆಯ ಬಳಿಕ 2021ರ ಜುಲೈ 26‌ ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಏರಿದ್ದರು.

ಇನ್ನು ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ 65, ಕಾಂಗ್ರೆಸ್‌ 136, ಜೆಡಿಎಸ್‌ 19, ಇತರರು 04 ಸ್ಥಾನಗಳನ್ನು ಗೆದ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!