ಕರ್ನಾಟಕ ಅಡ್ವಕೇಟ್ ಜನರಲ್ ಹುದ್ದೆಗೆ ಪ್ರಭುಲಿಂಗ ನಾವದಗಿ ರಾಜೀನಾಮೆ
ಬೆಂಗಳೂರು: ಇಂದು ಕರ್ನಾಟಕ ಅಡ್ವಕೇಟ್ ಜನರಲ್ ಹುದ್ದೆಗೆ ಪ್ರಭುಲಿಂಗ ನಾವದಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾದಂತ ಎಜೆ ಪ್ರಭುಲಿಂಗ ನಾವದಗಿ ಅವರು, ತಮ್ಮ ಕರ್ನಾಟಕ ಅಡ್ವಕೇಟ್ ಜನರಲ್ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದರು.
ನಿನ್ನೆಯಷ್ಟೇ ಕಾಂಗ್ರೆಸ್ ಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ಇಂದು ಎಜೆ ಹುದ್ದೆಗೆ ಪ್ರಭುಲಿಂಗ ನಾವದಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.




