ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಎಂಟು ಮಂದಿ ಸಚಿವರಾಗಿ ಆಯ್ಕೆ: ಇಂದು ಪ್ರಮಾಣ ವಚನ
ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದು ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ಇಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜತೆಗೆ ಎಂಟು ಮಂದಿ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಚಿವರಾಗಿ ಡಾ.ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ಜಮೀರ್ ಅಹ್ಮದ್ ಖಾನ್ ಅವರು ಇಂದು ಮಧ್ಯಾಹ್ನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಶೇಷವೆಂದರೆ ಇಂದು ಸಚಿವರಾಗಲಿರುವ ಎಂಟೂ ಮಂದಿಯು ಮಾಜಿ ಸಚಿವರು. (ಮುನಿಯಪ್ಪ ಕೇಂದ್ರ ಸಚಿವರಾಗಿದ್ದರು). ಇಂದು ಸಂಜೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ ತೆರಳಲಿದ್ದು, ಮತ್ತಷ್ಟು ಸಚಿವರನ್ನು ಸೇರಿಸುವ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ ನಡೆಸಲಿದ್ದಾರೆ.




