March 16, 2026

ಮಲ್ಪೆ: ಮೀನುಗಾರಿಕೆ ತೆರಳಿದ್ದ ಬೋಟ್ ಮುಳುಗಡೆ: 7 ಮಂದಿ ಮೀನುಗಾರರ ರಕ್ಷಣೆ

0
SANTU-16423.boat_.jpg

ಮಲ್ಪೆ: ಭಟ್ಕಳ ನೇತ್ರಾಣಿ ಸಮೀಪದ ಬಂಡೆಗೆ ಢಿಕ್ಕಿ ಹೊಡೆದು ಮೀನುಗಾರಿಕೆಗೆ ತೆರಳಿದ್ದ ಬೋಟು ಸೋಮವಾರ ಬೆಳಗ್ಗೆ 6 ಗಂಟೆಗೆ ಸುಮಾರಿಗೆ ಮುಳುಗಡೆಗೊಂಡಿದೆ. ಘಟನೆ ನಡೆದ ಸಂದರ್ಭದಲ್ಲಿ ಬೋಟ್ ನಲ್ಲಿ ಏಳು ಮಂದಿ ಮೀನುಗಾರರಿದ್ದರು. ಅವರನ್ನು ರಕ್ಷಿಸಲಾಗಿದೆ.

ಉದ್ಯಾವರ ಸಂಪಿಗೆನಗರದ ರಾಹಿಲ್ ಎಂಬವರಿಗೆ ಸೇರಿದ ಸೀ ಬರ್ಡ್ ಬೋಟು ಮೇ 21ರಂದು ರಾತ್ರಿ 7 ಮಂದಿ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಭಾರೀ ಮಳೆ ಗಾಳಿ ಸುರಿಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೋಟು ನಿಯಂತ್ರಣ ತಪ್ಪಿ ಅಲ್ಲೇ ಸಮೀಪದಲ್ಲಿದ್ದ ಕಲ್ಲು ಬಂಡೆಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೋಟು ಹೊಡೆದು, ಸಮುದ್ರದ ನೀರು ಬೋಟಿನ ಒಳಗೆ ನುಗ್ಗಿದೆ.

ಇದರ ಪರಿಣಾಮ ಬೋಟು ಸಮುದ್ರ ಮಧ್ಯದಲ್ಲಿಯೇ ಮುಳುಗಲಾರಂಭಿಸಿತ್ತು. ಕೂಡಲೇ ಮಾಹಿತಿ ತಿಳಿದ ಸಮೀಪದಲ್ಲಿದ್ದ ಬೋಟಿನವರು ಧಾವಿಸಿ ಬಂದು, ಮುಳುಗುತ್ತಿದ್ದ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆದರೆ ಈ ವೇಳೆ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಿತು. ಈ ಮಧ್ಯೆ ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಣೆ ಮಾಡಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಇದರಿಂದ ಸುಮಾರು 45 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!