ಸ್ವೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ: ನಾಳೆ ಚುನಾವಣೆ
ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಮಂಗಳೂರು ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.
ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಹೈಕಮಾಂಡ್ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿದ್ದು, ಮನವಿಗೆ ಮಂಗಳೂರು ಶಾಸಕ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ.




