ಬೆಳ್ತಂಗಡಿ:ಸಿದ್ದರಾಮಯ್ಯ ಕೊಲೆ ಮಾಡಿದ್ದು ಸರಿಯಾದರೆ ಕಳೆದ ಐದು ವರ್ಷ ಹರೀಶ್ ಪೂಂಜ ಏನು ಮಾಡುತ್ತಿದ್ದರು: ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯ 24 ಮಂದಿ ಹಿಂದೂಗಳನ್ನು ಹತ್ಯೆ ಮಾಡಿರುವುದಾಗಿ ಹರೀಶ್ ಪೂಂಜ ಹೇಳುತ್ತಾರೆ. ಇದು ಸತ್ಯವಾದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕು. ಹರೀಶ್ ಪೂಂಜ ಸುಳ್ಳು ಹೇಳಿದರೆ ಅವರಿಗೆ ಶಿಕ್ಷೆಯಾಗಬೇಕು. ಸಿದ್ದರಾಮಯ್ಯ ಕೊಲೆ ಮಾಡಿದ್ದು ಸರಿಯಾದರೆ ಕಳೆದ ಐದು ವರ್ಷ ಹರೀಶ್ ಪೂಂಜ ಏನು ಮಾಡುತ್ತಿದ್ದರು. ಬಿಜೆಪಿ ಸರಕಾರ ಏನು ಮಾಡುತ್ತಿತ್ತು. ಈಗ ಹರೀಶ್ ಪೂಂಜಗೆ ಜ್ಞಾನೋದಯವಾಗಿದೆಯಾ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ತಿಮರೋಡಿ ಪ್ರಶ್ನಿಸಿದರು.
ಬಿಜೆಪಿ ಕಾರ್ಯಕರ್ತರು ಎಂಬ ಹೆಸರಿನಲ್ಲಿ ಹರೀಶ್ ಪೂಂಜರ ಜನರು ಕೇಸರಿ ಹಾಕಿಕೊಂಡರೆ ಅವರೇ ಹಿಂದುತ್ವವಾದಿಗಳಾ ನನ್ನ ಮೇಲೆ 30ಕ್ಕಿಂತಲೂ ಹೆಚ್ಚು ಕೇಸ್ ಇದೆ, ಬೇಕಾದರೆ ಪೊಲೀಸ್ ಸ್ಟೇಷನ್ನಲ್ಲಿ ಕೇಳಿ ಎಂದ ತಿಮರೋಡಿ ‘ಕಾಗೆ ಕಟ್ಟಿದ ಗೂಡಿನಲ್ಲಿ ಕೋಗಿಲೆ ಮೊಟ್ಟೆ ಇಡುತ್ತಿದೆ’ ಎಂದು ಪೂಂಜರಿಗೆ ಟಾಂಗ್ ನೀಡಿದರು.
ಒಳ್ಳೆಯ ಕೆಲಸ ಮಾಡದ ಹರೀಶ್ ಪೂಂಜಾ ನಮ್ಮನ್ನೇ ಪ್ರಶ್ನಿಸುತ್ತಾರೆ. ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಹಿಂದುತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖಂಡರು ಉಪಸ್ಥಿತರಿದ್ದರು.