December 19, 2025

ಮುಖ್ಯಮಂತ್ರಿಯ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆ ಎಸೆದ ಬಿಜೆಪಿ‌ ಕಾರ್ಯಕರ್ತರು

0
image_editor_output_image-1370783383-1637818645444.jpg

ಭುವನೇಶ್ವರ: ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಹಿಂತಿರುಗುತ್ತಿರುವಾಗ ಪುರಿಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆಯಲಾಯಿತು.

ಪುರಿಯ ಆಸ್ಪತ್ರೆ ಛಕ್ ಬಳಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆದರು. ಅಷ್ಟೇಅಲ್ಲದೇ ಕಪ್ಪು ಬಾವುಟವನ್ನು ಬೀಸಿದರು ಎಂದು ಮೂಲಗಳು ತಿಳಿಸಿವೆ. ಕಾರ್ಯಕರ್ತರು “ನವೀನ್ ಪಟ್ನಾಯಕ್ ಡೌನ್ ಡೌನ್” ಎಂದು ಘೋಷಣೆ ಕೂಗಿದರು ಮತ್ತು ಅವರ ಭೇಟಿಯನ್ನು ವಿರೋಧಿಸಿದರು.

ಮಮಿತಾ ಮೆಹರ್ ಹತ್ಯೆಯಲ್ಲಿ ಗೃಹ ಖಾತೆ ರಾಜ್ಯ ಸಚಿವೆ ದಿಬ್ಯಾ ಶಂಕರ್ ಮಿಶ್ರಾ ಅವರ ಕೈವಾಡವಿದೆ ಎಂಬ ಆರೋಪದ ಮೇಲೆ ಬಿಜೆಪಿ ಮತ್ತು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕರು ಮೊಟ್ಟೆಯಿಂದ ಹೊಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಗನ್ನಾಥ ದೇಗುಲದಲ್ಲಿ ನಡೆಯುತ್ತಿರುವ ಮೂರು ದಿನಗಳ ಮಹಾಯಜ್ಞದ ಕೊನೆಯ ದಿನದಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಮ್ಮುಖದಲ್ಲಿ ಶ್ರೋತ್ರಿಯ ಬ್ರಾಹ್ಮಣ ಸಮುದಾಯದ ಪುರೋಹಿತರು ಪಠಣ ಮಾಡುವ ಭಜನೆಗಳ ಮಧ್ಯೆ ಪೂರಿ ಗಜಪತಿ ದಿಬ್ಯಸಿಂಗ ದೇಬ್ ಅವರು ಬುಧವಾರ ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!