August 12, 2026

ಮಂಗಳೂರು ವಿಮಾನ ನಿಲ್ದಾಣದಕ್ಕೆ ಬಾಂಬ್‌ ಇಟ್ಟ ಪ್ರಕರಣ: ಆದಿತ್ಯ ರಾವ್‌ ವಿರುದ್ಧ ಮತ್ತೊಂದು ದೂರು ದಾಖಲು

0
image_editor_output_image-512243449-1685682015053.jpg

ಶಿವಮೊಗ್ಗ: ಮಂಗಳೂರು ವಿಮಾನ ನಿಲ್ದಾಣದಕ್ಕೆ ಬಾಂಬ್‌ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲಿಸಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್‌ ಸೂಪರಿಂಟೆಂಡೆಂಟ್‌ ಅವರು ದೂರು ನೀಡಿದ್ದಾರೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್‌ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್‌ ಕೊಠಡಿ ಬಳಿ ಬಂದಿದ್ದ. ಇವತ್ತು ತನ್ನ ವಿಚಾರಣೆ ಇದೆಯೇ ಎಂದು ಪ್ರಶ್ನಿಸಿದ್ದ. ಅಲ್ಲಿದ್ದ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸಿ ಇಲ್ಲ ಎಂದು ತಿಳಿಸಿದ್ದರು.

ಸ್ವಲ್ಪ ದೂರ ಹೋಗಿದ್ದ ಆದಿತ್ಯ ಹಿಂತಿರುಗಿ ವಿ.ಸಿ.ಕೊಠಡಿಯಲ್ಲಿದ್ದ ಟಿವಿಯೊಂದಕ್ಕೆ ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾನೆ. ಅಷ್ಟರಲ್ಲಿ ಕೊಠಡಿಯಲ್ಲಿದ್ದ ಸಿಬ್ಬಂದಿ ಆದಿತ್ಯನನ್ನು ಹಿಡಿದಿದ್ದರು.

ಆದರೆ ಅವರಿಂದ ತಪ್ಪಿಸಿಕೊಂಡು ಮತ್ತೊಂದು ಟಿವಿಯನ್ನು ಒಡೆದು ಹಾಕಿದ್ದಾನೆ. ಕೂಡಲೆ ಸಿಬ್ಬಂದಿ ಆದಿತ್ಯನನ್ನು ಹಿಡಿದು ಜೈಲರ್‌ ವಶಕ್ಕೆ ಒಪ್ಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!