ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ: ಎಲ್ಲರಿಗೂ 200 ಯೂನಿಟ್ ವರೆಗೆ ವಿದ್ಯುತ್ ಉಚಿತ
ಬೆಂಗಳೂರು, ಜೂ.2: ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆ ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೆ ಈ ಯೋಜನೆಗಳನ್ನು ತಲುಪಿಸುತ್ತೇವೆ ಎಂದರು.
ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆ ಜಾರಿ: ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
12 ತಿಂಗಳ ಸರಾಸರಿ ಪಡೆದುಕೊಂಡು ಅದರ ಬಳಿಕ ಶೇ 10 ರಷ್ಟು ವಿದ್ಯುತ್ ಉಚಿತ ನೀಡಲಾಗುವುದು. 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಘೋಷಣೆಯಾಗಿದೆ. ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿ ಮಾಡಬೇಕು: ಸಿದ್ದರಾಮಯ್ಯ