September 20, 2024

ಮಂಗಳೂರು: ಮಣಿಪುರದಲ್ಲಿ ನಡೆಯುವ ಕ್ರೈಸ್ತರ ದಾಳಿಗೆ ತೀವ್ರ ಖಂಡನೆ: ಕೈಸ್ತರಿಂದ ಬೃಹತ್ ಪ್ರತಿಭಟನೆ

0

ಮಂಗಳೂರು, ಮಣಿಪುರದಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಆರಂಭಗೊಂಡ ಹಿಂಸಾಚಾರ ಪೂರ್ಣ ಪ್ರಮಾಣದಲ್ಲಿ ಮಣಿಪುರವನ್ನು ಸ್ಥಬ್ದಗೊಳಿಸಿದೆ. ಭುಗಿಲೆದ್ದ ಹಿಂಸಾಚಾರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕಥೋಲಿಕ್ ಸಭಾ ಮಂಗಳೂರು ಪ್ರದೇಶ(ರಿ) ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇದರ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಸಾಮೂಹಿಕ ಧರಣಿ ನಡೆಯಿತು.


ಮಂಗಳೂರು ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಕ್ರೈಸ್ತರು, ಮಾತ್ರವಲ್ಲದೆ ಸಮಾನ ಮನಸ್ಕ ಸಂಘಟನೆಯವರು ಕೂಡ ಭಾಗವಹಿಸಿದ್ದರು. ಮಣಿಪುರದಲ್ಲಿ ಶಾಂತಿ ನೆಲೆಸಲು ಸರಕಾರ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ, ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಬೇಕು. ಬೂದಿ ಮುಚ್ಚಿದ ಕೆಂಡದಂತಿರುವ ಪರಿಸ್ಥಿತಿಯನ್ನು ಸರಕಾರ ನಿಭಾಯಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!