ಕೇರಳ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ:
ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಕೊಚ್ಚಿ: ಕಾನೂನು ವಿದ್ಯಾರ್ಥಿನಿ ಮೋಫಿಯಾ ಪರ್ವೀನ್ ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಸರ್ಕಲ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕೊಚ್ಚಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇರಳ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
21 ವರ್ಷದ ಕಾನೂನು ವಿದ್ಯಾರ್ಥಿನಿ ತನ್ನ ಆತ್ಮಹತ್ಯೆ ಪತ್ರದಲ್ಲಿ ಸರ್ಕಲ್ ಇನ್ಸ್ಪೆಕ್ಟರ್, ತನ್ನ ಪತಿ ಮತ್ತು ಅತ್ತೆಯರನ್ನು ಹೆಸರಿಸಿದ್ದಾಳೆ. ಏತನ್ಮಧ್ಯೆ, ಆಕೆಯ ಪತಿ ಮತ್ತು ಅತ್ತೆಯನ್ನು ಬಂಧಿಸಲಾಗಿದೆ.