February 4, 2026

ಪುತ್ತೂರು : ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಪ್ರಕರಣ: ಪ್ರಜ್ವಲ್ ಎಂಬಾತನ ವಿರುದ್ಧ ಕೇಸು ದಾಖಲು

0
IMG-20230610-WA0054.jpg

ಪುತ್ತೂರು : ದರ್ಬೆಯ ಪ್ರತಿಷ್ಠಿತ ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ನೆಲ್ಲಿಗುಂಡಿ ನಿವಾಸಿ ಗಾಡ್ವಿನ್ ದಿನಕರ್ ನೀಡಿದ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪುತ್ತೂರಿನ ದರ್ಬೆ ಶೋ ರೂಮ್ ನಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುವ ದಿನಕರ್ ಜೂ.9 ರಂದು ರಾತ್ರಿ ವೇಳೆ ಗೆಳೆಯರಾದ ರಕ್ಷಿತ್, ಭವಿತ್, ಹೇಮಂತ್ ಮತ್ತು ಸಂದೇಶ್ ರವರೊಂದಿಗೆ ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್ ನ ಎರಡನೇ ಅಂತಸ್ತಿನಲ್ಲಿರುವ ರೂಮ್ ನಲ್ಲಿ ರಕ್ಷಿತ್ ನ ಹುಟ್ಟುಹಬ್ಬ ಆಚರಣೆ ಮಾಡಿ ನಂತರ ಡಿನ್ನರ್ ಪಾರ್ಟಿಯನ್ನು ಮಾಡಿರುತ್ತಾರೆ.

ಆ ವೇಳೆ ದಿನಕರ್ ತನ್ನ ಪರಿಚಯದ ಪ್ರಜ್ವಲ್ ಎಂಬಾತನಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ ವೇಳೆ ಅವರ ಸ್ನೇಹಿತ ರಕ್ಷಿತ್ ಎಂಬಾತನು “ಪೋನ್ ಕಾಲ್ ಕಟ್ ಮಾಡು ನೀನು ಹುಟ್ಟು ಹಬ್ಬದ ಪಾರ್ಟಿಗೆ ಬಂದವ ನೀನು ಇಲ್ಲಿ ಏನು ಪೋನ್ ಮಾಡುತ್ತೀಯಾ?” ಎಂದು ಹೇಳಿರುತ್ತಾನೆ. ಆಗ ದಿನಕರ್ ಪೋನ್ ಕಾಲ್ ಕಟ್ ಮಾಡಿದ್ದು, ಇದನ್ನು ಕೇಳಿಸಿಕೊಂಡಿದ್ದ ಪ್ರಜ್ವಲ್ ಸ್ವಲ್ಪ ಸಮಯದ ನಂತರ ಏಕಾಏಕಿಯಾಗಿ ದಿನಕರ್ ಇರುವ ರೂಮ್ ಗೆ ಬಂದು “ನನಗೆ ಪೋನ್ ನಲ್ಲಿ ಬೈದವರು ಯಾರು?” ಎಂದು ಕೇಳಿದಾಗ ದಿನಕರ್ ನಿನಗೆ ಬೈದದ್ದು ಅಲ್ಲ ಅದು ನನಗೆ ಪೋನ್ ಇಡುವಂತೆ ಜೋರು ಮಾಡಿರುವುದು ಎಂದು ತಿಳಿಸಿರುತ್ತಾರೆ.

ಆ ನಂತರ ಪ್ರಜ್ವಲ್ ನು ಅಲ್ಲಿಂದ ಹೊರಗಡೆ ಹೋದವನು ಸ್ವಲ್ಪ ಸಮಯದ ನಂತರ ವಾಪಾಸ್ಸು ಕೈಯಲ್ಲಿ ಕತ್ತಿಯಂತಹ ಆಯುಧವನ್ನು ಹಿಡಿದುಕೊಂಡು ಬಂದು ಲಾಡ್ಜ್ ನ ಬಾಲ್ಕನಿಯಲ್ಲಿ ರಕ್ಷಿತ್ ನು ಪೋನ್ ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಪ್ರಜ್ವಲ್ ನು ರಕ್ಷಿತ್ ನಿಗೆ ನಿನಗೆ ಎಷ್ಟು ಧೈರ್ಯ ನನ್ನನ್ನೇ ಕೀಳಾಗಿ ಮಾತನಾಡುತ್ತೀಯಾ.!!? ಎಂದು ಹೇಳಿದಾಗ ರಕ್ಷಿತ್ ನು ಆತನ ಕೈಯಲ್ಲಿದ್ದ ಆಯುಧವನ್ನು ನೋಡಿ ಓಡಿ ಹೋಗಲು ಮುಂದಾದಾಗ ರಕ್ಷಿತ್ ನನ್ನು ತಡೆದು ಹಲ್ಲೆ ಮಾಡಲು ಮುಂದಾಗಿದ್ದು, ಆಗ ರಕ್ಷಿತ್ ನು ಪ್ರಜ್ವಲ್ ನಿಂದ ತಪ್ಪಿಸಿಕೊಂಡು ಕೆಳಕಡೆ ಓಡುವ ಸಂದರ್ಭ ಲಾಡ್ಜ್ ನ ಮೆಟ್ಟಲಿನಲ್ಲಿ ಕಾಲು ಜಾರಿ ಬಿದ್ದಿದ್ದು, ಬಳಿಕ ಎದ್ದು ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿರುತ್ತಾರೆ. ನಂತರ ಪ್ರಜ್ವಲ್ ನು ನನ್ನ ತಂಟೆಗೆ ಯಾರು ಬಂದರೂ ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಅಲ್ಲಿಂದ ದಿನಕರ್ ಮತ್ತು ಅವರ ಸ್ನೇಹಿತರಿಗೆ ಕೆಟ್ಟ ಪದಗಳಿಂದ ಬೈಯುತ್ತಾ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿರುತ್ತಾನೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:48/2023 ಕಲಂ: 48/2023 ಕಲಂ: 341, 504, 506,324 ಐಪಿಸಿ ಹಾಗೂ 25 (1B)(b) ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಜ್ವಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ..

Leave a Reply

Your email address will not be published. Required fields are marked *

error: Content is protected !!