February 3, 2026

ಉಪ್ಪಿನಂಗಡಿ | ವಿದ್ಯಾರ್ಥಿಗಳ ನಡುವೆ ಹೊಡೆದಾಟ: 8 ಮಂದಿಯ ವಿರುದ್ಧ FIR ದಾಖಲು

0
image_editor_output_image2141317510-1686546214745.jpg

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ತಂಡದ ನಡುವೆ ಬಸ್ ನಿಲ್ದಾಣದಲ್ಲಿ ಹೊಡೆದಾಟ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಇತ್ತಂಡಗಳನ್ನು ಸಮಾಧಾನಿಸಿ ಚದುರಿಸಲು ಯತ್ನಿಸಿದ್ದಾರೆ.

ಇದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21), ಅಭಿಷಿತ್ (20), ಧನುಷ್ (19), ಮೋಹನ್ (19) ನಂದನ್ (19), ವಿನ್ಯಾಸ್ (18), ರೂಪೇಶ್(20) ಹಿತೇಶ್(19) ಎಂಬವರನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!