August 25, 2026

ನೆಲ್ಯಾಡಿ | ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಕಂದಕ್ಕೆ ಉರುಳಿ ಕಾರು: ಆರು ಮಂದಿಗೆ ಗಾಯ

0
image_editor_output_image-2070147566-1686992294148.jpg

ನೆಲ್ಯಾಡಿ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಕಂದಕ್ಕೆ ಉರುಳಿ ಆರು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಗಾಯಾಳುಗಳು ಬೆಂಗಳೂರು ಆರ್. ಟಿ. ನಗರ ನಿವಾಸಿಗಳೆಂದು ತಿಳಿದು ಬಂದಿದೆ. ಒಬ್ಬರು ಪುರುಷ, ನಾಲ್ಕು ಮಂದಿ ಮಹಿಳಾ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!