March 24, 2026

ಜಮೀನಿಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ: ಅಕ್ಕ ಮೃತ್ಯು, ತಂಗಿಗೆ ಗಂಭೀರ ಗಾಯ

0
IMG-20230619-WA0027.jpg

ರಾಮನಗರ: ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರದಲ್ಲಿ ಜಮೀನಿಗೆ ತೆರಳುತ್ತಿದ್ದ ಅಕ್ಕ-ತಂಗಿಯರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಜಯಮ್ಮ (50) ಮೃತ ಮಹಿಳೆಯಾಗಿದ್ದು, ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂದಿದ್ದಾರೆ.

ಇನ್ನು ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!