March 24, 2026

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು

0
image_editor_output_image260693245-1687239114076.jpg

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿ ರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್ ನಲ್ಲಿ ಸೋಮವಾರ ಮಧ್ಯಾಹ್ನ‌ ನಡೆದಿದೆ.

ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ.

ಅದೇ ಸಮಯದಲ್ಲಿ ಪ್ರಯಾಣಿಕರ ತಂಗುದಾಣದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಕಾರು ಧಾವಿಸಿ‌ ಬರುತ್ತಿರುವುದನ್ನು ಕಂಡು ಅತ್ತ ಓಡಲಾರದೆ ಇತ್ತ ಧರೆಯ ಹಾರಲಾರದ ಸಂದಿಗ್ಧತೆಯಲ್ಲಿ ಒಂದು ಮೂಲೆಗೆ ಹೋಗಿ ನಿಂತಿದ್ದರಿಂದ ಬಚಾವಾದರು.

ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ವಿದೇಶದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗ್ಗೆ ಕಾರಿನಲ್ಲಿ ಮನೆಗೆ ಬರುತ್ತಿದ್ದರು.

ಇನ್ನೇನು ಎರಡು ಕಿ. ಮೀ. ದೂರ ಸಂಚರಿಸಿದರೆ ಮನೆ ತಲುಪಬೇಕಿತ್ತು. ಸಂಬಂಧಿ ಕಾರು ಚಲಾಯಿಸುತ್ತಿದ್ದು ಅದೃಷ್ಟವಶಾತ್ ಚಾಲಕ ಹಾಗೂ ಅಶ್ರಫ್ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!