ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಮಹಂತೇಶ್ (30) ಮೃತ ದುರ್ದೈವಿ. ಬೆಳಗ್ಗೆ ಚಿಕ್ಕಮ್ಮನಹಳ್ಳಿಯಿಂದ ಗಂಜಿಗಟ್ಟೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.
ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿರುವ ವಾಹನ ಈತನ ಬೈಕಿಗೆ ಡಿಕ್ಕಿಯಾಗಿರುವ ಸಾಧ್ಯತೆ ಇದೆ.




