ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ನೇಮಕ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಅವರು ಜೂ.21ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಅವರು ಈ ಹಿಂದೆ ಬಳ್ಳಾರಿ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಆಗಿದ್ದರು.




